Sugama sangeet karyakram at Mumbai !

೨೦೧೯ ರ ಅಕ್ಟೊಬರ್ ೧೯ ನೇ ತಾರೀಖಿನ ಶನಿವಾರದಂದು, ವಿದುಷಿ ಶ್ರೀಮತಿ ರಷ್ಮಿ ಕಾಖಂಡಕಿಯವರಿಂದ ಸುಗಮ ಸಂಗೀತ ಕಾರ್ಯಕ್ರಮವಿತ್ತು. 
ಸ್ಥಳ : ಮೈಸೂರ್ ಅಸೋಸಿಯೇಷನ್, ಮಾಟುಂಗಾ, ಮುಂಬಯಿ-೧೯
ಸಮಯ :  ಸಾಯಂಕಾಲ : ೬-೩೦ ರಿಂದ -೮-೪೦ ರವರೆಗೆ 
ಮೊದಲು, ಅಸೋಸಿಯೇಷನ್ ಹಿರಿಯ ಸದಸ್ಯೆ, ಶ್ರೀಮತಿ. ಲಕ್ಷ್ಮೀ ಸೀತಾರಾಮ್ ಅವರು ವಿದುಷಿ,  ರಷ್ಮಿ ಕಾಖಂಡಕಿ ಅವರನ್ನು ಹಾಗೂ ಅವರ ತಂಡದವರನ್ನು  ಸಭಿಕರಿಗೆ ಪರಿಚಯಿಸಿದರು.
ಅಸೋಸಿಯೇಷನ್ ಅಧ್ಯಕ್ಷೆ ಶ್ರೀಮತಿ ಕಮಲಾ ಅವರು ಗಾಯಕಿ, ರಷ್ಮಿ  ಕಾಖಂಡಕಿ, ಹಾಗೂ  ತಂಡದವರಿಗೆ ಪುಷ್ಪ ಗುಚ್ಛ ನೀಡಿ ಗೌರವಿಸಿದರು.




  ವಿದುಷಿ.ಶ್ರೀಮತಿ ರಷ್ಮಿ ಕಾಖಂಡಕಿಯವರು ಹಿಂದುಸ್ತಾನಿ ಸಂಗೀತದಲ್ಲಿ ವಿಶಾರದ ಪದವಿಗಳಿಸಿದ್ದಾರೆ. ಮಿರಜ್ ನಗರದ ಗಂಧರ್ವ ಸಂಗೀತ ವಿಶ್ವವಿದ್ಯಾಲಯದ ಕೊನೆಯ ವರ್ಷದ ಅಲಂಕಾರ್ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ರಷ್ಮಿಯವರು ಸಂಗೀತಕಾರ, ಪಂ. ಮಹೇಶ್ ಕುಲಕರ್ಣಿ ಅವರ ಶಿಷ್ಯೆ. ಮಹಾರಾಷ್ಟ್ರದ ಡೊಂಬಿವಲಿಯಲ್ಲಿ ವಾಸವಾಗಿರುವ ವಿದುಷಿ.ರಷ್ಮಿ  ಕಾಖಂಡಕಿಯವರು ೩೦ ವಿದ್ಯಾರ್ಥಿಗಳಿಗೆ  ಮಿರಜ್ ನ ಗಂಧರ್ವ ಸಂಗೀತ ವಿದ್ಯಾಲಯದ ಪರೀಕ್ಷೆಗೆ ಪರಿಣಿತಿ ನೀಡುತ್ತಿದ್ದಾರೆ.  ತಮ್ಮ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಸುಗಮ ಸಂಗೀತ್, ಮತ್ತು ಮರಾಠಿ ಲೋಕ್ ಸಂಗೀತ್ ನಲ್ಲಿ ಹೆಚ್ಚು ಒತ್ತು ಕೊಡಲಾಗುತ್ತಿದೆ. 
M.T.N.L ಸಂಸ್ಥೆ ಯಲ್ಲಿ ನೌಕರಿಯಲ್ಲಿರುವ ರಶ್ಮಿಯವರಿಗೆ ಅವರ ಪರಿವಾರದ ಸಂಪೂರ್ಣ ಸಹಕಾರದ ನೆರವಿದೆ. 


\
ಡಾ.  ಗಣಪತಿ ಶಂಕರಲಿಂಗ, ಕಾರ್ಯದರ್ಶಿ,  ಶ್ರೀಮತಿ ಭವಾನಿ,  ಶ್ರೀ. ರಮಾಕಾಂತ ಜೋಶಿ,  ಮತ್ತು ಹಲವಾರು ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.



                                            ಶ್ರೀಮತಿ ಲಕ್ಷ್ಮೀ ಸೀತಾರಾಂ ಹಾಗೂ ವಿದುಷಿ ರಶ್ಮಿಯವರು
             ವಿದುಷಿ. ರಷ್ಮಿ ಕಾಖಂಡಕಿಯವರ ಜೊತೆಯಲ್ಲಿ  ಶ್ರೀಮತಿ ಕಮಲಾ ಕಾಂತರಾಜು, ಮತ್ತು ಇತರರು.





Comments

Popular posts from this blog

"ನೇಸರು ಜಾಗತಿಕ ಏಕಾಂಕ ನಾಟಕ ರಚನಾ ಸ್ಪರ್ಧೆ-2022ರ ಬಹುಮಾನ ವಿತರಣೆ ಹಾಗೂ ಕನ್ನಡ ನಾಟಕ- "ಚಿಟ್ಟೆ" ಪ್ರದರ್ಶನ !

ಮೈಸೂರು ಅಸೋಸಿಯೇಷನ್ ಮುಂಬಯಿನಲ್ಲಿ 'ಕನಕಜಯಂತ್ಯೋತ್ಸವ' !

Mysore association, Mumbai, Swarna Gauri & Ganesh pujotsav (2023) !